
ನ್ಯೂಸ್10ಕನ್ನಡ ರಿಪೋರ್ಟರ್ – ಸುನಿಲ್ ಗೌಡ 🖋️
ಮೈಸೂರು: ಇಲ್ಲಿನ ಹೋಟೆಲ್ನಲ್ಲಿ ಸೆಸ್ಕ್ ಎಇಇ ದೀಪಕ್ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪ್ರಕರಣ ದಾಖಲಾಗಿದೆ. 'ದೀಪಕ್ ಸೆಸ್ಕ್ ವಿಜಿಲೆನ್ಸ್ ಅಧಿಕಾರಿಯಾಗಿದ್ದು, ಅನಧಿಕೃತ ವಿದ್ಯುತ್ ಸಂಪರ್ಕದ ದಂಡ ಕಡಿಮೆ ಮಾಡಲು ₹3 ಲಕ್ಷ ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿ ಹಣ ವಶಕ್ಕೆ ಪಡೆಯಲಾಗಿದೆ' ಎಂದು ಮೂಲಗಳು ತಿಳಿಸಿವೆ. ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಮ್ಯಾಥ್ಯು ಥಾಮಸ್, ಇನ್ಸ್ಪೆಪೆಕ್ಟರ್ ರವಿಕುಮಾರ್ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ. ನ್ಯೂಸ್10ಕನ್ನಡ ರಿಪೋರ್ಟರ್ – ಸುನಿಲ್ ಗೌಡ 🖋️