
ಕೊಳ್ಳೇಗಾಲ ಭೀಮನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ಮಾರಕ ಸಂಘಕ್ಕೆ ಪದಾಧಿಕಾರಿಗಳ ಚುನಾವಣೆ ನಡೆಸಲಾಗಿದ್ದು ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮೇ.11 ರಂದು ನಡೆಸಲಾಗುವುದು ಎಂದು ಅಧ್ಯಕ್ಷ ಎಸ್.ಆನಂದಮೂರ್ತಿ ಅವರು ತಿಳಿಸಿದರು.
ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ.ಅಂಬೇಡ್ಕರ್ ಭವನವನ್ನು ಅಧಿಕಾರಿಗಳು ಹಾಗೂ ಸಮಾಜದ ಮುಖಂಡರ ಜೊತೆ ಭೇಟಿ ಮಾಡಿ ಕಾಮಗಾರಿಯನ್ನು ಪರಿಶೀಲಿಸಿ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇದೇ ತಿಂಗಳ 11 ರಂದು ಅಂಬೇಡ್ಕರ್ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ಸಮುದಾಯ ಭವನವನ್ನು ವ್ಯವಸ್ಥಿತ ರೀತಿಯಲ್ಲಿ ಸಜ್ಜುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲು ಸ್ಥಳ ಪರಿಶೀಲನೆ ಮಾಡಲಾಗಿದೆ ಎಂದು ತಿಳಿಸಿದರು.
ಪದಗ್ರಹಣದ ನಂತರ ಡಾ.ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿಗಳನ್ನು ಪೂರ್ಣಗೊಳಿಸಿ ಭವನದ ಉದ್ಘಾಟನೆಗೆ ಮುಂದಿನ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದೆ ವೇಳೆ ಸಮಾಜ ಕಲ್ಯಾಣಾಧಿಕಾರಿ ಕೇಶವಮೂರ್ತಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘಕ್ಕೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆ ಮೇ.11 ರಂದು ಪದಗ್ರಹಣ ಕಾರ್ಯಕ್ರಮವನ್ನು ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಇದರ ಪ್ರಕಾರ ಸಮುದಾಯವನ್ನು ಅಚ್ಚುಕಟ್ಟುಗೊಳಿಸಲು ಡಾ.ಬಿ.ಅಂಬೇಡ್ಕರ್ ಸಮುದಾಯ ಭವನವನ್ನು ವ್ಯವಸ್ಥಿತವಾಗಿ ಸಜ್ಜುಗೊಳಿಸಲು ಇಂದು ಎಲ್ಲಾ ಪದಾಧಿಕಾರಿಗಳು ಹಾಗೂ ಮುಖಂಡರ ಜೊತೆ ಪರಿಶೀಲಿಸಲಾಗಿದೆ ಎಂದರು.
ಈ ಸಂಧರ್ಭದಲ್ಲಿ ಕೆ.ಆರ್.ಡಿ.ಐ.ಎಲ್ ಎಇಇ ಚಿಕ್ಕಲಿಂಗಯ್ಯ, ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಉಪಾಧ್ಯಕ್ಷರು ಕಿರಣ್ ಕಾರ್ಯದರ್ಶಿ ಪಾಪಣ್ಣ, ಸಹ ಕಾರ್ಯದರ್ಶಿ, ಶಶಿಧರ, ಖಜಾಂಚಿ ರಾಜೇಶ್,ಮುಖಂಡರಾದ ಸಿದ್ದಪ್ಪಾಜಿ, ದಿಲೀಪ್, ಶಿವರಾಳ, ಲಿಂಗರಾಜು ಮೇಸ್ತ್ರಿ ಹಾಗೂ ಮುಖಂಡರು ಇದ್ದರು.