ಮೇ. 2 ರಂದು ಸಿ.ಎಂ.ಸಿದ್ದರಾಮಯ್ಯ ಆಗಮಿಸುವ ಹಿನ್ನೆಲೆ : ಶಾಸಕ ರಮೇಶ್ ಬಂಡಿಸಿದ್ದೇಗೌಡ ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ್ ಸ್ಥಳ ಪರಿಶೀಲನೆ.

ಮೇ.2ರಂದು ಅಲ್ಲಾಪಟ್ಟಣ ಗ್ರಾಮಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ ಶ್ರೀರಂಗಪಟ್ಟಣ: ತಾಲೂಕಿನ ಅಲ್ಲಾಪಟ್ಟಣ ಗ್ರಾಮಕ್ಕೆ ಮೇ.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿ ಸುವ ಹಿನ್ನೆಲೆ ಶಾಸಕ ರಮೇಶ ಬಂಡಿಸಿದ್ದೇಗೌಡ ಹಾಗೂ ಜಿಲ್ಲಾಧಿಕಾರಿ ಡಾ. ಕುಮಾರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಶಾಸಕ ರಮೇಶ ಬಂಡಿಸಿದ್ದೇಗೌಡ ಮಾತನಾಡಿ, ಅಲ್ಲಾ ಪಟ್ಟಣ ಗ್ರಾಮದಲ್ಲಿ ಬೀರೇಶ್ವರ (ಅನ್ನದಾನೇಶ್ವರ)ದೇವಾಲಯ ಜೀರ್ಣೋದ್ಧಾರಗೊಂಡಿದ್ದು, ಲೋಕಾರ್ಪಣೆಗೊಳಿಸಲು ಮೇ.02ರಂದು ಅದನ್ನು ಇದೇ ಅವರು ಕುಟುಂಬ ಆಗಮಿಸಲಿ ದೇವಾಲಯದವನ್ನು ಲೋಕಾರ್ಪಣೆ ಮಾಡಲಿದ್ದು,ಎಲ್ಲಾ ಸಿದ್ಧತೆಗಳ ಕಾರ್ಯ ಭರದಿಂದ ಸಾಗಿದೆ. ಜಿಲ್ಲಾಡಳಿತ ಕೂಡ ಸ್ಥಳ ಪರಿಶೀಲಿಸಿ ಬರುವ ಮುಖ್ಯ ಮಂತ್ರಿಗಳ ಸ್ವಾಗತಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಜೊತೆಗೆ ದೇವಾಲಯದ ಸುತ್ತಲೂ ಸ್ಥಳವಕಾಶ ಅವಶ್ಯಕತೆ ಇದ್ದು, ಬರುವ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಗೆ ಸಿದ್ದತೆ ಮಾಡಿಕೊಂಡಿದ್ದಾರೆ ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ದೇವರು ಅನ್ನದಾನೇಶ್ವರಸ್ವಾಮಿ ಆಗಿರುವುದರಿಂದ ಅವರು ಅಲ್ಲಿಗೆ ಬಂದು ಪೂಜಾ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದು, ದೇವಾಲಯಕ್ಕೆ ಹೋಗುವ ರಸ್ತೆಯನ್ನು ಈಗಾಗಲೇ ಕಾಮಗಾರಿ ನಡೆಸಿ ಅಭಿವೃದ್ಧಿ ಪಡಿಸಲಾಗುತ್ತಿದೆ.ದೇವಾಲಯದ ಆವರಣದಲ್ಲಿ ಸ್ವಚ್ಛತೆ,ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ. ಬರುವ ಜನರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ಸಿದ್ಧತೆ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್, ತಹಶೀಲ್ದಾರ್ ಪರಶುರಾಮ ಸತ್ತಿಗೇರಿ, ತಾಪಂ ಇಒ ವೇಣು ಸೇರಿದಂತೆ ಇತರರಿದ್ದರು.