ಲೋಕಾಯುಕ್ತ ದಾಳಿ ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದ ಮೂವರು ಅಧಿಕಾರಿಗಳು

ಲಂಚ ಸ್ವೀಕರಿಸುವ ವೇಳೆ ಆರ್ ಐ ಮತ್ತು ಇಬ್ಬರು ಗ್ರಾಮಲೆಕ್ಕಾಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆದಿದೆ.

ಜಮೀನು ಪೌತಿ ಖಾತೆ ಮಾಡಿಕೊಡಲು ವ್ಯಕ್ತಿಯೊಬ್ಬರ ಬಳಿ 2.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಳುವಳ್ಳಿ ಗ್ರಾಮಲೆಕ್ಕಾಧಿಕಾರಿ ಮಡಿವಾಳಪ್ಪ ಹಾಗೂ ವಿಜಯಪುರ ಗ್ರಾಮಲೆಕ್ಕಾಧಿಕಾರಿ ಸುನಿಲ್ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದು ವಿಜಯಪುರದ ಆರ್ ಐ ಸತ್ಯನಾರಾಯಣ ಪರಾರಿಯಾಗಿದ್ದಾರೆ.

ಈ ಸಂಬಂಧ ಗೌತಮ್ ದೂರು ನೀಡಿದ್ದು, ಲೋಕಾಯುಕ್ತ ಎಸ್ಪಿ ಪವನ್ ನೆಜೂರ್ ನೇತೃತ್ವದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು. ಅದರಂತೆ ದೂರುದಾರರು ಶುಕ್ರವಾರ ಸುನೀಲ್ ಮತ್ತು ಮಡಿವಾಳಪ್ಪ ಅವರಿಗೆ ಲಂಚ ನೀಡಿದ್ದರು. ಈ ವೇಳೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.ಹಣ ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ ಎಂದು ಲೋಕಾಯುಕ್ತ ಇನ್ಸ್ಪೆಕ್ಟರ್ ಜೆ.ರಮೇಶ್ ತಿಳಿಸಿದ್ದಾರೆ.
ನ್ಯೂಸ್10ಕನ್ನಡ ರಿಪೋರ್ಟರ್ – ಸುನಿಲ್ ಗೌಡ 🖋️