
ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪ ಎದುರಿಸುತ್ತಿರುವ ಸರ್ಕಾರಿ ನೌಕರರ ಆಸ್ತಿ ವಿವರಕ್ಕೆ ಲೋಕಾಯುಕ್ತ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ. ಈ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲೋಕಾಯುಕ್ತ ರಿಜಿಸ್ಟ್ರಾರ್ ಎಂ. ಚಂದ್ರಶೇಖರ್ ರೆಡ್ಡಿ ಪತ್ರ ಬರೆದಿದ್ದಾರೆ. ಈ ಬಗ್ಗೆ ವಿವರ ಇಲ್ಲಿದೆ.
ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪ ಎದುರಿಸುತ್ತಿರುವ ಸರ್ಕಾರಿ ನೌಕರರ ಆಸ್ತಿ ವಿವರ ನೀಡಲು ನಿರಾಕರಿಸುತ್ತಿರುವ ಇಲಾಖಾ ಮುಖ್ಯಸ್ಥರ ವರ್ತನೆಗೆ ಗರಂ ಆಗಿರುವ ಲೋಕಾಯುಕ್ತ ಸಂಸ್ಥೆ, ಸರ್ಕಾರಿ ಸೇವಾ ನಿಯಮಗಳ ಅಸ್ತ್ರ ಪ್ರಯೋಗಿಸಿದೆ.
ಈ ಕುರಿತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಲೋಕಾಯುಕ್ತ ರಿಜಿಸ್ಟ್ರಾರ್ ಎಂ. ಚಂದ್ರಶೇಖರ್ ರೆಡ್ಡಿ, ” ರಾಜ್ಯ ಸರಕಾರದ ಎಲ್ಲಾಅಧಿಕಾರಿ ಹಾಗೂ ನೌಕರರ ಆಸ್ತಿ ವಿವರಗಳ ಮಾಹಿತಿ ನೀಡಬೇಕು. ಜತೆಗೆ, ಸರ್ಕಾರಿ ವೆಬ್ಸೈಟ್ಗಳಲ್ಲಿ ಪ್ರಕಟಿಸಲು ಕ್ರಮ ವಹಿಸಲು ಇಲಾಖಾ ಮುಖ್ಯಸ್ಥರಿಗೆ ನಿರ್ದೇಶಿಸಬೇಕು” ಎಂದು ಕೋರಿದ್ದಾರೆ.

ತನಿಖೆ ಸಲುವಾಗಿ ಸರ್ಕಾರಿ ನೌಕರರ ಆಸ್ತಿ ವಿವರ ಒದಗಿಸುವಂತೆ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರಿಗೆ ಹಲವು ಬಾರಿ ಮನವಿ ಮಾಡಿದರೂ ನಿರ್ಲಕ್ಷ್ಯ ವಹಿಸಲಾಗಿದೆ. ಮುಖ್ಯಸ್ಥರ ಈ ವರ್ತನೆ ನೌಕರರನ್ನು ರಕ್ಷಿಸುವ ಗುರಿಯಾಗಿರುವಂತೆ ಕಂಡು ಬಂದಿದೆ. ಈ ನಿಟ್ಟಿನಲ್ಲಿರಾಜ್ಯ ಸರ್ಕಾರಿ ನೌಕರರು ಹಾಗೂ ಅಖಿಲ ಭಾರತ ಸೇವೆಗಳ ನಿಯಮಗಳು 1968ರ (16) ಅನ್ವಯ ಸರ್ಕಾರಿ ನೌಕರರು ನೇಮಕಾತಿ ಹೊಂದಿದ ದಿನದಿಂದಲೇ ಪ್ರತಿ 12 ತಿಂಗಳ ಅವಧಿಯಲ್ಲಿಅವರ ಹಾಗೂ ಕುಟುಂಬದ ಎಲ್ಲಸದಸ್ಯರ ಆಸ್ತಿ ಹಾಗೂ ಹೊಣೆಗಾರಿಕೆ ವಿವರ ಸಲ್ಲಿಸಬೇಕೆಂಬ ನಿಯಮ ಪಾಲಿಸುವಂತಾಗಬೇಕು. ಈ ನಿಯಮ ಪಾಲನೆಯಾಗದಿದ್ದರೆ ಅಧಿಕಾರಿ/ನೌಕರರ ದುರ್ನಡತೆಯಾಗಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ವೆಬ್ಸೈಟ್ಗಳಲ್ಲಿ ಪ್ರಕಟಿಸಿಈ ನಿಟ್ಟಿನಲ್ಲಿ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ರಾಜ್ಯ ಸರಕಾರದ ಎಲ್ಲಾಅಧಿಕಾರಿ ಹಾಗೂ ನೌಕರರ ಆಸ್ತಿ ವಿವರಗಳ ಮಾಹಿತಿ ನೀಡಬೇಕು. ಜತೆಗೆ, ಸರ್ಕಾರಿ ವೆಬ್ಸೈಟ್ಗಳಲ್ಲಿಪ್ರಕಟಿಸಲು ಕ್ರಮ ವಹಿಸುವಂತೆ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶಿಸಬೇಕು. ಇದರಿಂದ ಶಂಕಿತ ನೌಕರನ ಆಸ್ತಿಗೆ ಸಂಬಂಧಿಸಿ ತನಿಖಾಧಿಕಾರಿಗಳು ವೆಬ್ಸೈಟ್ನಲ್ಲಿಯೇ ವಿವರ ಪಡೆಯಲು ಅನುಕೂಲವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.ಸರ್ಕಾರಿ ನೌಕರರ ಆಸ್ತಿ ವಿವರ ಸಲ್ಲಿಕೆ ಹಾಗೂ ವೆಬ್ಸೈಟ್ನಲ್ಲಿಪ್ರಕಟಿಸುವುದಕ್ಕೆ ಸಂಬಂಧಿಸಿ ಯಾವುದೇ ಹೆಚ್ಚಿನ ಮಾಹಿತಿ ಹಾಗೂ ವಿವರ ಅಗತ್ಯವಿದ್ದರೆ ಖುದ್ದು ಲೋಕಾಯುಕ್ತರೇ ಚರ್ಚೆಗೆ ಸಿದ್ಧರಿದ್ದಾರೆ ಎಂದು ಪತ್ರದಲ್ಲಿಉಲ್ಲೇಖಿಸಿದ್ದಾರೆ. ಪತ್ರದ ಕುರಿತು ಮುಂದಿನ ಎರಡು ವಾರಗಳಲ್ಲಿಕ್ರಮ ಕೈಗೊಂಡು ಮಾಹಿತಿ ನೀಡಬೇಕಿದೆ ಎಂದು ರಿಜಿಸ್ಟ್ರಾರ್ ಪತ್ರದಲ್ಲಿಮನವಿ ಮಾಡಿದ್ದಾರೆ.
ನಿಯಮ ಪಾಲನೆ ಆಗದಿದ್ದರೆ ಕ್ರಮಕಾನೂನಿನ ನಿಯಮಗಳಂತೆ ಸರ್ಕಾರಿ ನೌಕರರ ಆಸ್ತಿ ವಿವರದ ಮಾಹಿತಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ. ಈ ಸಂಬಂಧ ಇದುವರೆಗೂ ಲಿಖಿತ ಪ್ರತಿಕ್ರಿಯೆ ಬಂದಿಲ್ಲ. ನಿಯಮ ಪಾಲನೆ ಆಗದಿದ್ದರೆ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ನ್ಯಾ.ಬಿ ಎಸ್ ಪಾಟೀಲ್ ತಿಳಸಿದ್ದಾರೆ.
ನ್ಯೂಸ್10ಕನ್ನಡ ರಿಪೋರ್ಟರ್ – ಸುನಿಲ್ ಗೌಡ 🖋️