ಇತ್ತೀಚಿನ ಸುದ್ದಿರಾಜಕೀಯ

ಸಿದ್ದರಾಮಯ್ಯಗೆ ಹೈಕಮಾಂಡ್​ನಿಂದ ದೆಹಲಿಗೆ ಬುಲಾವ್​..!

ಬೆಂಗಳೂರು (ಅಕ್ಟೋಬರ್​ 05); ರಾಜ್ಯದಲ್ಲಿ ಇನ್ನೂ ಒಂದೂವರೆ ವರ್ಷದಲ್ಲಿ ಚುನಾವಣೆ ಎದುರಾಗಲಿದೆ. ಈ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಏರಲೇಬೇಕು ಎಂಬ ಮಹತ್ವಾಕಾಂಕ್ಷೆಯನ್ನು ಕಾಂಗ್ರೆಸ್​ (Congress) ಹೊಂದಿದೆ. ಅಲ್ಲದೆ, ಕಾಂಗ್ರೆಸ್​ ಪಕ್ಷವನ್ನು ದಕ್ಷಿಣ ಭಾರತದಲ್ಲಿ ಮತ್ತಷ್ಟು ಬಲಿಷ್ಠಗೊಳಿಸುವ ತುರ್ತು ಕಾಂಗ್ರೆಸ್​ ನಾಯಕರಿಗೆ ಇದೆ.

ಆದರೆ, ಪ್ರಸ್ತುತ ಸ್ಥಿತಿಯಲ್ಲಿ ಸಿದ್ದರಾಮಯ್ಯ ಹೊರತು ಕಾಂಗ್ರೆಸ್​ ದಕ್ಷಿಣ ಭಾರತದಲ್ಲಿ ಬೇರೆ ಯಾವುದೇ ದೊಡ್ಡ ಮಾಸ್​ ಲೀಡರ್​ (Mass Leader) ಇಲ್ಲ. ಹೀಗಾಗಿ ಕಾಂಗ್ರೆಸ್​ ರಾಷ್ಟ್ರೀಯ ರಾಜಕಾರಣದಲ್ಲೂ ಸಿದ್ದರಾಮಯ್ಯ ಅವರನ್ನು ಮುನ್ನೆಲೆಗೆ ತರಬೇಕು ಎಂಬ ಮಾತುಗಳೂ ಚಾಲ್ತಿಯಲ್ಲಿವೆ. ಈ ಮಾತುಗಳ ನಡುವೆಯೇ ಕಾಂಗ್ರೆಸ್​ ಹಂಗಾಮಿ ರಾಷ್ಟ್ರಾಧ್ಯಕ್ಷ ಸೋನಿಯಾ ಗಾಂಧಿ (Sonia Gandhi) ಬುಲಾವ್ ಮೇರೆಗೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಹಲವು ಊಹಾಪೋಗಳಿಗೆ ಕಾರಣವಾಗಿದೆ.

ಸಿದ್ದು ದೆಹಲಿ ಭೇಟಿ‌ ಹಿಂದಿದೆ ಹಲವು ಲೆಕ್ಕಾಚಾರ;

ಚುನಾವಣೆಗೆ ಮುನ್ನ ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷವನ್ನು ಮತ್ತಷ್ಟು ಬಲಪಡಿಸುವುದಕ್ಕಾಗಿ ಕಾಂಗ್ರೆಸ್​ ಹೈಕಮಾಂಡ್​ ಈಗಾಗಲೇ ಸಾಕಷ್ಟು ಕಸರತ್ತುಗಳನ್ನು ನಡೆಸುತ್ತಲೇ ಬಂದಿದೆ. ರಾಷ್ಟ್ರ ಮಟ್ಟದಲ್ಲೂ ಕಾಂಗ್ರೆಸ್​ ಬಲವರ್ಧನೆ ಸಲುವಾಗಿ ಶೀಘ್ರದಲ್ಲೇ ಎಐಸಿಸಿ ಪುನಾರಚನೆಗೆ ಚಿಂತನೆ ನಡೆಸಿರುವ ಸೋನಿಯಾ ಗಾಂಧಿ, ಇದೇ ಮೊದಲ‌ಬಾರಿಗೆ ಇಬ್ಬರು ಇಲ್ಲವೇ ನಾಲ್ವರು ಕಾರ್ಯಾಧ್ಯಕ್ಷರ ನೇಮಕ ಮಾಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *

Back to top button