ಇತ್ತೀಚಿನ ಸುದ್ದಿರಾಜ್ಯ

ಮೃತ ಕುಟುಂಬಕ್ಕೆ 3 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ: ಮಕರಬ್ಬಿ ಕಲುಷಿತ ನೀರು ಸೇವನೆ ಪ್ರಕರಣ..!

ಬೆಂಗಳೂರು (ಅ. 5): ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಮಕರಬ್ಬಿ ಗ್ರಾಮದಲ್ಲಿ (Makkarabbi Village polluted drinking water) ಕಲುಷಿತ ನೀರು ಸೇವಿಸಿ  ಸಾವನ್ನಪ್ಪಿದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಪ್ರಕರಣ ದುಃಖದ ಸಂಗತಿಯಾಗಿದೆ.

ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆಯಲ್ಲಿ ಸಾವನ್ನಪ್ಪಿದ ಪ್ರತಿ ಕುಟುಂಬಕ್ಕೆ 3 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ. ಪ್ರಕರಣ ಕುರಿತು ಸಮಗ್ರ ತನಿಖೆ ನಡೆಸಿ, ವರದಿ ನೀಡಲು ಸೂಚನೆ ನೀಡಲಾಗಿದೆ. ಇದೇ ವೇಳೆ ಅಜಲ್​ಪುರದ ಘಟನೆ ಬಗ್ಗೆಯೂ ಮಾಹಿತಿ ಕೇಳಲಾಗಿದೆ ಎಂದರು.

ಘಟನೆ ಸ್ಥಳಕ್ಕೆ ಜಿಲ್ಲಾ ಎಸ್​ಪಿ ಭೇಟಿ
ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಇಂದು 6ಕ್ಕೆ ಏರಿದೆ. ಕಳೆದೊಂದು ವಾರದಿಂದ ಘಟನೆಯಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆ ಇಂದು ನೂತನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ಅರುಣ್​ ಕೆ ಮಕರಬ್ಬಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಇವರ ಜೊತೆಗೆ ಹೊಸಪೇಟೆ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ಹಡಗಲಿ ತಹಸೀಲ್ದಾರ್ ಮಹೇಂದ್ರ, ತಾಲೂಕುಪಂಚಾಯತಿ ಇಒ ಪ್ರಭಾಕರ ರೆಡ್ಡಿ, ಆರೋಗ್ಯಾಧಿಕಾರಿ ವಿನೋದ್, ನೈರ್ಮಲ್ಯ ಇಲಾಖೆ ಎಡಬ್ಲ್ಯೂಇ ಕೂಡ ಭೇಟಿ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button