ಇತ್ತೀಚಿನ ಸುದ್ದಿರಾಜ್ಯ
ಟೊಮೆಟೊ ಬೆಳೆಗೆ ವಿಷಹಾಕಿದ ದುಷ್ಕರ್ಮಿಗಳು.

ಕೆಲ ದಿನಗಳಲ್ಲಿ ಕೈಗೆ ಬರಬೇಕಿದ್ದ ಟೊಮೆಟೊ ಬೆಳೆಗೆ ಕಳೆನಾಶಕ ಸಿಂಪಡಿಸಿ ಸಂಪೂರ್ಣವಾಗಿ ನಾಶ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮೊಸಳೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರೈತ ಸಂತೋಷ್ ಎನ್ನುವರು ಒಂದು ಎಕರೆಯಲ್ಲಿ ಟೊಮೆಟೊ ಬೆಳೆದಿದ್ದರು, ಇನ್ನೇನು ಕೆಲವೇ ದಿನಗಳಲ್ಲಿ ಟೊಮೆಟೊ ಫಸಲ ಕೈಗೆ ಬರಬೇಕಿತ್ತು. ಆದರೆ, ಯಾರೋ ದುಷ್ಕರ್ಮಿಗಳು, ಕಳೆನಾಶಕ ಸಿಂಪಡಿಸಿ ಟೊಮೆಟೊ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿ ವಿಕೃತಿ ಮೆರೆದಿದ್ದಾರೆ. ಲಕ್ಷಾಂತರ ರೂ ಬೆಳೆ ನಾಶವಾಗಿದ್ದಕ್ಕೆ ರೈತ ಸಂತೋಷ್ ಕಂಗಾಲಾಗಿದ್ದಾರೆ.