Rajakiyaಇತ್ತೀಚಿನ ಸುದ್ದಿರಾಜಕೀಯರಾಜ್ಯಸುದ್ದಿ

ಕರ್ನಾಟಕದಲ್ಲಿ ಗ್ಯಾರಂಟಿ ಅಗತ್ಯತೆ ಬಗ್ಗೆ ಕಾಂಗ್ರೆಸ್ ಪಾಳಯದಲ್ಲಿ ಚರ್ಚೆ!

ಉಚಿತ, ಉಚಿತ, ಉಚಿತ …. ಇದ್ಯ ಇದು ಚುನಾವಣಾ ರಾಜಕಾರಣದಲ್ಲಿ ಶುರುವಾಗಿರುವ ಟ್ರೆಂಡ್. ಈ ರೀತಿಯಲ್ಲಿ ಉಚಿತ ಕೊಡುಗೆಗಳ ಮೂಲಕ ಜನಕಲ್ಯಾಣ ಯೋಜನೆಗಳ ಅಗತ್ಯತೆಯ ಬಗ್ಗೆ ರಾಜಕೀಯ ಪಕ್ಷಗಳಲ್ಲಿ, ಆರ್ಥಿಕ ತಜ್ಞರಲ್ಲಿ ಹಾಗೂ ಜನಸಾಮಾನ್ಯರಲ್ಲಿ ಭಿನ್ನವಾದ ಅಭಿಪ್ರಾಯಗಳು ಇವೆ. ಅದರಲ್ಲೂ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲಿನ ಬಳಿಕ ಕರ್ನಾಟಕದಲ್ಲೂ ಗ್ಯಾರಂಟಿ ಯೋಜನೆಗಳ ಅಗತ್ಯತೆಯ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ.

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಜನರಿಗೆ ಉಚಿತವಾಗಿ ಹಲವು ಕೊಡುಗೆಗಳನ್ನು ನೀಡಿತ್ತು. ಉಚಿತ ನೀರು, ವಿದ್ಯುತ್, ಮಹಿಳೆಯರಿಗೆ ಬಸ್ ಪ್ರಯಾಣ, ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಉತ್ತಮ ಶಿಕ್ಷಣ, ಮೊಹಲ್ಲಾ ಕ್ಲೀನಿಕ್‌ಗಳು ಇವೆಲ್ಲವೂ ಆಮ್ ಆದ್ಮಿ ಪಕ್ಷದ ಜನ ಕಲ್ಯಾಣ ಯೋಜನೆಗಳಾಗಿದ್ದವು. ಹೀಗಿದ್ದರೂ ದೆಹಲಿಯಲ್ಲಿ ಆಪ್ 22 ರಡರ ಗಡಿಯನ್ನು ದಾಟಲು ಸಾಧ್ಯವಾಗಿಲ್ಲ. ಈ ಹಿಂದಿನ ಚುನಾವಣೆಯಲ್ಲಿ 62 ಸ್ಥಾನಗಳನ್ನು ಗಳಿಸಿದ್ದ ಆಪ್ ಇದೀಗ ದಿಢೀರನೆ ಭಾರೀ ಹಿನ್ನಡೆಯನ್ನು ಅನುಭವಿಸಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ 5 ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಬೊಕ್ಕಸಕ್ಕೆ ಭಾರೀ ಹೊರೆಯಾಗಿದೆ. ಹೀಗಿದ್ದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಆದರೆ ದೆಹಲಿ ಚುನಾವಣೆಯ ಬಳಿಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಹೊಸ ಚರ್ಚೆ ಶುರುವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಕಡಿವಾಣ ಹಾಕಬೇಕೋ ಬೇಡವೋ ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪಾಳಯದಲ್ಲೇ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ದಿ ಕಾರ್ಯಕ್ರಮಗಳಿಗೆ ಹಿನ್ನಡೆ ಉಂಟಾಗುತ್ತಿದೆ ಎಂದು ಬಿಜೆಪಿ ಆರೋಪ ಮಾಡುತ್ತಾ ಬಂದಿದೆ. ವಾರ್ಷಿಕವಾಗಿ 56,000 ಕೋಟಿ ಗ್ಯಾರಂಟಿ ಯೋಜನೆಗಳಿಗೆ ವೆಚ್ಚವಾಗುತ್ತಿದೆ. ಬಜೆಟ್‌ನ ಹೆಚ್ಚಿನ ಅನುದಾನ ಪ್ರಮಾಣ ಗ್ಯಾರಂಟಿ ಯೋಜನೆಗಳಿಗೆ ಖರ್ಚಾಗುತ್ತಿದೆ. ಹೀಗಾಗಿ ಶಾಸಕರಿಗೆ ಕ್ಷೇತ್ರವಾರು ಅನುದಾನ, ದೊಡ್ಡ ಮಟ್ಟದ ಅಭಿವೃದ್ದಿ ಕಾರ್ಯಗಳಿಗೆ ಹಿನ್ನೆಡೆ ಉಂಟಾಗಿತ್ತಿದೆ ಎಂಬ ಅಭಿಪ್ರಾಯ ಇದೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಏನು ಹೆಜ್ಜೆಯನ್ನು ಇಡುತ್ತದೆ ಎಂಬುವುದು ಮಾತ್ರ ಕುತೂಹಲದ ಸಂಗತಿಯಾಗಿದೆ. ಈ ಹಿಂದೆಯೊಮ್ಮೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಬೇಕು ಎಂಬ ಅಭಿಪ್ರಾಯ ಬಂದಿತ್ತು. ಅದರೆ ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರವೂ ಸೈಲೆಂಟಾಗಿತ್ತು. ಇದೀಗ ದೆಹಲಿ ಚುನಾವಣೆಯಲ್ಲಿ ಆಪ್ ಸೋಲು ಕರ್ನಾಟಕದ ಗ್ಯಾರಂಟಿ ಯೋಜನೆಗಳ ಬಗ್ಗೆ ಪರಾಮರ್ಶೆ ಮಾಡುವ ಸಾಧ್ಯತೆ ಅಲ್ಲಗಳೆಯುವ ಹಾಗಿಲ್ಲ.ಇನ್ನು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಿದರೆ ಅದರಿಂದ ಆಗುವ ಪರಿಣಾಮಗಳ ಬಗ್ಗೆಯೂ ಸರ್ಕಾರ ಚಿಂತನೆ ಮಾಡುತ್ತಿದೆ. ಹೀಗಾಗಿ ಎಚ್ಚರಿಕೆಯ ಹೆಜ್ಜೆಯನ್ನು ಇಡಲು ಮುಂದಾಗಿದೆ. ಸದ್ಯ ಯೋಜನೆ ನಿಲ್ಲಿಸಲು ನಿರ್ಧಾರ ಮಾಡದಿದ್ದರೂ ಪರಿಷ್ಠರಿಸುವ ಸಾಧ್ಯತೆ ಅಲ್ಲಗಳೆಯುವ ಹಾಗಿಲ್ಲ.

Related Articles

Leave a Reply

Your email address will not be published. Required fields are marked *

Back to top button