ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ ಇನ್ನಿಲ್ಲ.

ಲಕ್ನೋ: ಅಯೋಧ್ಯೆಯ ರಾಮ ಜನ್ಮಭೂಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿದ್ದ ಮಹಂತ್ ಸತ್ಯೇಂದ್ರ ದಾಸ್ ಅವರು ಬುಧವಾರ(ಫೆ.11)ದಂದು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಂತ್ ಸತ್ಯೇಂದ್ರ ದಾಸ್ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.85 ವರ್ಷದ ಮಹಂತ್ ಸತ್ಯೇಂದ್ರ ದಾಸ್ ಮೆದುಳಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು. ಈ ತಿಂಗಳ ಆರಂಭದಲ್ಲಿ ಅವರನ್ನು ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (SGPGI)ಗೆ ದಾಖಲಿಸಲಾಗಿತ್ತು.”ಅಯೋಧ್ಯೆಯ ರಾಮಮಂದಿರದ ಮುಖ್ಯ ಅರ್ಚಕರಾದ ಸತ್ಯೇಂದ್ರ ದಾಸ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಫೆಬ್ರವರಿ 3ರಂದು ಅವರನ್ನು ಗಂಭೀರ ಸ್ಥಿತಿಯಲ್ಲಿ ನರವಿಜ್ಞಾನ ವಿಭಾಗದ ಹೈ ಡಿಪೆಂಡೆನ್ಸಿ ಯೂನಿಟ್ನಲ್ಲಿ ದಾಖಲಿಸಲಾಗಿತ್ತು..” ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಮಹಂತ್ ಸತ್ಯೇಂದ್ರ ದಾಸ್ ಅವರು ತಮ್ಮ 20ನೇ ವಯಸ್ಸಿನಲ್ಲೇ ಮುಖ್ಯ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. 1992ರ ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸದ ಸಮಯದಲ್ಲೂ, ಅವರು ದೇವಸ್ಥಾನದ ಮುಖ್ಯ ಅರ್ಚಕರಾಗಿದ್ದರು.ಮಹಂತ್ ಸತ್ಯೇಂದ್ರ ದಾಸ್ ಅವರು ದೀರ್ಘಕಾಲದಿಂದ ಅಯೋಧ್ಯೆಯಲ್ಲಿನ ರಾಮಮಂದಿರದೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಅವರ ಅನುಪಸ್ಥಿತಿಯು ಭಕ್ತರಿಗೆ ಮತ್ತು ದೇವಾಲಯದ ಆಡಳಿತಕ್ಕೆ ದೊಡ್ಡ ನಷ್ಟವಾಗಿದೆ.ಮಹಂತ್ ಸತ್ಯೇಂದ್ರ ದಾಸ್ ಅವರು ತಮ್ಮ ಜೀವನದುದ್ದಕ್ಕೂ ರಾಮ ಭಕ್ತಿಗೆ ಹೆಸರುವಾಸಿಯಾಗಿದ್ದರು. ಅವರ ಸಾವು ರಾಮಭಕ್ತರಿಗೆ ತೀವ್ರ ದುಃಖವನ್ನುಂಟು ಮಾಡಿದೆ.