ರಾಜ್ಯ

ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ

ಸಿಎಂ ಸಿದ್ದರಾಮಯ್ಯ ಮಂಡಿಸಿರೋ ಬಜೆಟ್​ನ ಗಾತ್ರ ಬರೋಬ್ಬರಿ 4 ಲಕ್ಷ ಕೋಟಿ. ಹೌದು, ಸಿಎಂ ಸಿದ್ದರಾಮಯ್ಯ ಇಂದು (ಮಾರ್ಚ್​ 07) ತಮ್ಮ 16ನೇ ಬಜೆಟ್ ಮಂಡನೆ ಮಾಡಿದ್ದಾರೆ. ಕಳೆದ ವರ್ಷ 3 ಲಕ್ಷ 71 ಸಾವಿರದ 383 ಕೋಟಿ ರೂ. ಬಜೆಟ್ ಗಾತ್ರವಿತ್ತು. ಈ ಬಾರಿ ಈ ಅಂಕಿ 4 ಲಕ್ಷ ಕೋಟಿ ದಾಟಿದೆ. ಅಂದ್ರೆ 4 ಲಕ್ಷ 9 ಸಾವಿರದ 549 ಕೋಟಿ ರೂಪಾಯಿಯ ದಾಖಲೆಯ ಬಜೆಟ್ ಇದಾಗಿದೆ. ಆದ್ರೆ, ಈ ಬಜೆಟ್​ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ನಾನಾ ರೀತಿ ವ್ಯಂಗ್ಯವಾಡುತ್ತಿದ್ದಾರೆ.2025ನೇ ಸಾಲಿನ ಕರ್ನಾಟಕ ಬಜೆಟ್​​ ಇಂದು (ಮಾರ್ಚ್​ 07) ಮಂಡನೆಯಾಗಿದ್ದು, ಸಿದ್ದರಾಮಯ್ಯ ಮಂಡಿಸಿರೋ ಬಜೆಟ್​ನ ಗಾತ್ರ ಬರೋಬ್ಬರಿ 4 ಲಕ್ಷ ಕೋಟಿ ರೂ ಆಗಿದೆ.. ಈ ಮೂಲಕ ಸಿದ್ದರಾಮಯ್ಯನವರು ದಾಖಲೆ ಬರೆದಿದ್ದಾರೆ. ಇನ್ನು ಈ ಬಜೆಟ್​ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ. ಸರ್ಕಾರ ರಂಜಾನ್ ಹಬ್ಬದ ಇಫ್ತಾರ್ ಕೂಟದ ಔತಣವನ್ನು ಪೂರ್ಣವಾಗಿ ಕೊಟ್ಟಿದೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ವ್ಯಂಗ್ಯವಾಡಿದ್ದಾರೆ.ಈ ಬಗ್ಗೆ ಬಾಗಲಕೋಟೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ. ಸರ್ಕಾರ ರಂಜಾನ್ ಹಬ್ಬದ ಇಫ್ತಾರ್ ಕೂಟದ ಔತಣವನ್ನು ಪೂರ್ಣವಾಗಿ ಕೊಟ್ಟಿದೆ. ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸಲ್ಮಾನರಿಗೆ ಕೊಟ್ಟ ಅನುದಾನ ನೋಡಿದ್ರೆ, ಇದು ಮುಸಲ್ಮಾನರ ಸರ್ಕಾರ ಅನ್ನೋದನ್ನ ಸಿದ್ದರಾಮಯ್ಯ ಮತ್ತೊಮ್ಮೆ ಸಿದ್ದ ಮಾಡಿಕೊಟ್ಟಿದ್ದಾರೆ. ರಾಹುಲ್ ಗಾಂಧಿ ಹೇಳಿದಂತೆ ಇನ್ನೊಮ್ಮೆ ಇದು ಮುಸಲ್ಮಾನರ ಸರ್ಕಾರ ಎನ್ನುವುದನ್ನ ದೃಢಪಡಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಅಲ್ಪಸಂಖ್ಯಾತ 16 ಮಹಿಳಾ ಕಾಲೇಜ್, 100 ಉರ್ದು ಶಾಲೆಗೆ ಹೈಟೆಕ್ ಟಚ್, ಹಜ್ ಭವನ ನಿರ್ಮಾಣಕ್ಕೆ ದುಡ್ಡು ಕೊಡ್ತಿದ್ದಾರೆ. ಮುಸಲ್ಮಾನರ ಮದುವೆಗೆ ಸಹಾಯಧನ ಕೊಟ್ಟಿದ್ದಾರೆ. ಮುಸಲ್ಮಾನರು ಎಂದು ಹೇಳಬಾರದು ಎನ್ನುವ ಸಲುವಾಗಿ ಅಲ್ಪಸಂಖ್ಯಾತರು ಎಂದು ಹೇಳಿದ್ದಾರೆ. 25 ಸಾವಿರ ವಿದ್ಯಾರ್ಥಿಗಳಿಗೆ ಸ್ವಯಂ ರಕ್ಷಣಾ ತರಬೇತಿ. ಯಾಕೆ, ಅವರಿಗೆ ಯಾಕೆ ರಕ್ಷಣಾ ತರಬೇತಿ? ಬೇರೆ ವಿದ್ಯಾರ್ಥಿಗಳಿಗೆ ಸ್ವಯಂ ರಕ್ಷಣೆ ಬೇಡವೇನು ಎಂದು ಪ್ರಶ್ನಿಸಿದರು.


Related Articles

Leave a Reply

Your email address will not be published. Required fields are marked *

Back to top button