ರಾಜ್ಯ
Trending

ರಾಜ್ಯದ ಕೆಲ ರೈಲುಗಳ ಸಂಚಾರ ರದ್ದು

ಬೆಂಗಳೂರು, ಏಪ್ರಿಲ್​ 09: ಬೇಸಿಗೆ ರಜೆ (Summer Holiday) ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವವರಿಗೆ ನೈಋತ್ಯ ರೈಲ್ವೆ ಶಾಕ್​ ನೀಡಿದೆ. ನೈಋತ್ಯ ರೈಲ್ವೆ (South Western Railway) ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರು-ಬಂಗಾರಪೇಟೆ (Bengaluru-Bangarpete) ಮತ್ತು ಮೈಸೂರು-ಅರಸಿಕೆರೆ (Mysore-Arsikere) ನಡುವೆ ಸಂಚರಿಸುವ ರೈಲುಗಳ ಸಂಚಾರವನ್ನು ರದ್ದು ಮಾಡಿದೆ. ಅಲ್ಲದೇ, ಕೆಲ ರೈಲುಗಳ ಮಾರ್ಗ ಬದಲಾವಣೆ ಮಾಡಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​​ (ಟ್ವಿಟರ್​) ಮೂಲಕ ಮಾಹಿತಿ ನೀಡಿದೆ.ವೈಟ್‌ಫೀಲ್ಡ್-ಕೃಷ್ಣರಾಜಪುರಂ ನಿಲ್ದಾಣಗಳ ನಡುವಿನ ಸೇತುವೆ ಕಾಮಗಾರಿ (ಸೇತುವೆ ಸಂಖ್ಯೆ.834) ಕಾರಣ ಬೆಂಗಳೂರು-ಬಂಗಾರಪೇಟೆ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ಮಾರ್ಗ ಬದಲಾವಣೆ ಮಾಡಿದೆ. ರೈಲು ವೇಳಾಪಟ್ಟಿಯಲ್ಲಿ ಕೆಲ ಬದಲಾವಣೆ ಮಾಡಿದೆ.

ರೈಲುಗಳ ರದ್ದತಿ:

  1. ರೈಲು ಸಂಖ್ಯೆ 06527: ಬಂಗಾರಪೇಟೆ-ಎಸ್​ಎಮ್​ವಿಟಿ ಬೆಂಗಳೂರು ಮೆಮು ವಿಶೇಷ ರೈಲು ಏಪ್ರಿಲ್ 12, 15, 19 ಮತ್ತು 22, 2025 ರಂದು ರದ್ದಾಗಲಿದೆ.
  2. ರೈಲು ಸಂಖ್ಯೆ 06528: ಎಸ್​ಎಮ್​ವಿಟಿ ಬೆಂಗಳೂರು-ಬಂಗಾರಪೇಟೆ ಮೆಮು ವಿಶೇಷ ರೈಲು ಏಪ್ರಿಲ್ 13, 16, 20 ಮತ್ತು 23, 2025 ರಂದು ರದ್ದಾಗಲಿದೆ.

ರೈಲುಗಳ ಭಾಗಶಃ ರದ್ದು

ರೈಲು ಸಂಖ್ಯೆ 16521: ಬಂಗಾರಪೇಟೆ-ಕೆಎಸ್​ಆರ್​ ಬೆಂಗಳೂರು ಮೆಮು ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 15 ಮತ್ತು 22 ರಂದು ವೈಟ್‌ಫೀಲ್ಡ್-ಕೆಎಸ್​ಆರ್​ ಬೆಂಗಳೂರು ನಿಲ್ದಾಣಗಳ ನಡುವೆ ಸಂಚಾರ ರದ್ದಾಗಲಿದೆ. ಇದು ವೈಟ್‌ಫೀಲ್ಡ್‌ನಲ್ಲಿ ಅಲ್ಪಾವಧಿಗೆ ಕೊನೆಗೊಳ್ಳುತ್ತದೆ.

ರೈಲುಗಳ ಮಾರ್ಗ ಬದಲಾವಣೆ:

  1. ರೈಲು ಸಂಖ್ಯೆ 06269: ಮೈಸೂರು-ಎಸ್​ಎಮ್​ವಿಟಿ ಬೆಂಗಳೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲು, ಏಪ್ರಿಲ್ 12, 15, 19 ಮತ್ತು 22 ರಂದು ಕೆಎಸ್​ಆರ್​ ಬೆಂಗಳೂರು ಮೂಲಕ ಸಂಚರಿಸುತ್ತದೆ. ಈ ರೈಲು ಇನ್ಮುಂದೆ ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆಯಾಗುವುದಿಲ್ಲ.
  2. ರೈಲು ಸಂಖ್ಯೆ 06270: ಎಸ್​ಎಮ್​ವಿಟಿ ಬೆಂಗಳೂರು-ಮೈಸೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲು, ಏಪ್ರಿಲ್ 15 ಮತ್ತು 22 ರಂದು ಎಸ್​ಎಮ್​ವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ, ಯಶವಂತಪುರ ಮತ್ತು ಕೆಎಸ್​ಆರ್​ ಬೆಂಗಳೂರು ಮೂಲಕ ಸಂಚರಿಸುತ್ತದೆ. ಈ ರೈಲು ಕೂಡ ಇನ್ಮುಂದೆ ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆಯಾಗುವುದಿಲ್ಲ.
  3. ರೈಲು ಸಂಖ್ಯೆ 11013: ಲೋಕಮಾನ್ಯ ತಿಲಕ್ ಟರ್ಮಿನಸ್-ಕೊಯಮತ್ತೂರು ಡೈಲಿ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 14 ಮತ್ತು 21 ಗೌರಿಬಿದನೂರು, ಯಲಹಂಕ, ಲೊಟ್ಟೆಗೊಲ್ಲಹಳ್ಳಿ, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಕರ್ಮೇಲಾರಾಮ್ ಮತ್ತು ಹೊಸೂರು ನಿಲ್ದಾಣಗಳ ಮೂಲಕ ಸಂಚರಿಸುತ್ತದೆ. ಇದು ಬೆಂಗಳೂರು ಪೂರ್ವ, ಬೆಂಗಳೂರು ಕಂಟೋನ್ಮೆಂಟ್ ಮತ್ತು ಕೆಎಸ್‌ಆರ್ ಬೆಂಗಳೂರಿನಲ್ಲಿ ನಿಲುಗಡೆಯಾಗುವುದಿಲ್ಲ. ಆದಾಗ್ಯೂ, ಇದು ಯಶವಂತಪುರದಲ್ಲಿ ತಾತ್ಕಾಲಿಕ ನಿಲುಗಡೆಯಾಗುತ್ತದೆ. ರಾತ್ರಿ 09:20ಕ್ಕೆ ಯಶವಂತಪುರಕ್ಕೆ ಆಗಮಿಸುವ ರೈಲು 09:40ಕ್ಕೆ ಹೊರಡುತ್ತದೆ.

Related Articles

Leave a Reply

Your email address will not be published. Required fields are marked *

Back to top button